25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿತ್ತು.


ತರಬೇತಿಯ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಉದ್ಘಾಟಿಸಿ ಮಾತನಾಡುತ್ತಾ ಒಕ್ಕೂಟದ ಪದಾಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿ ಗುಂಪುಗಳ ಪರಿಚಯ ಮಾಡಿಕೊಳ್ಳಬೇಕು. ಗುಂಪುಗಳ ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ಅವುಗಳನ್ನು ಕಾರ್ಯಕರ್ತರ ಸಹಕಾರದ ಮೂಲಕ ಸರಿಪಡಿಸಬೇಕು.
ಒಕ್ಕೂಟದ ಮಾಸಿಕ ಸಭೆಗಳಿಗೆ ಗುಂಪಿನ ಸದಸ್ಯರು ಸಾಲದ ಬೇಡಿಕೆ ಗಳನ್ನು ಸಲ್ಲಿಸಬೇಕು ಒಕ್ಕೂಟ ಸಭೆ ಆದ ಬಳಿಕ ಉಪಸಮಿತಿ ಸಭೆಯನ್ನು ನಡೆಸಿ ಗುಂಪಿನ ಗುಣಮಟ್ಟ ಸದಸ್ಯರ ಮರು ಪಾವತಿ ಸಾಮರ್ಥ್ಯ ಪರಿಗಣಿಸಿ ಸಮರ್ಪಕ ವಾಗೀ ಚರ್ಚಿಸಿ ಸಾಲ ಬಿಡುಗಡೆಗೆ ಶಿಫಾರಸ್ಸು ಮಾಡಬೇಕು ಎಂದರು.


ಒಕ್ಕೂಟದ ವಾರ್ಷಿಕ ಬಜೆಟ್ ತಯಾರು ಮಾಡಿ ಅನುಷ್ಟಾನ ಮಾಡಬೇಕು ಇವುಗಳಲ್ಲಿ ಮುಖ್ಯವಾಗಿ ಶಾಲಾ ಕೈ ತೋಟ, ಸ್ವಚ್ಛತಾ ಕಾರ್ಯಕ್ರಮ, ಪರಿಸರ ಕಾರ್ಯಕ್ರಮ, ಹೊಸ ಗುಂಪು ರಚನೆ, ಶ್ರಮದಾನ, ಕೃಷಿ ತರಬೇತಿ, ಅಧ್ಯಯನ ಪ್ರವಾಸ, ಗಿಡಗಳ ನಾಟಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ, ನೀರಾವರಿ ಸೌಲಭ್ಯ, ಸಮುದಾಯ ಅಭಿವೃದ್ಧಿ ಕಾರ್ಯಗಳು ಮೊದಲಾದವುಗಳನ್ನು ಪರಿಗಣಿಸಬೇಕು ಎಂದು ವಿವರಿಸಿದರು.


ಉಡುಪಿ ಪ್ರಾದೇಶಿಕ ವಿಭಾಗದ ಕಚೇರಿ ತಪಾಸಣಾ ವಿಭಾಗದ ಯೋಜನಾಧಿಕಾರಿ ಅಮರ್ ಪ್ರಸಾದ್, ಸಮನ್ವಯಧಿಕಾರಿ ಶ್ರೀಮತಿ ಹೇಮಲತಾ, ರುಡ್ ಸೆಟ್ ಸಂಸ್ಥೆಯ ಉಷಾ ಸಮಾಜ್ ತರಬೇತಿಯನ್ನು ನಡೆಸಿಕೊಟ್ಟರು.
ತಾಲೂಕ್ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕರಾದ ಶಿವಾನಂದ, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.


ವಲಯದ ಎಲ್ಲಾ ಒಕ್ಕೂಟದ ಪದಾಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya
error: Content is protected !!