23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya
error: Content is protected !!