April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

*ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆಯೆಂಬ ವಿಶ್ವಾಸವನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!