September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

*ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆಯೆಂಬ ವಿಶ್ವಾಸವನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಕೆ‌ಎಂಜೆ ವತಿಯಿಂದ “ಭಾರತದ ಬಹುತ್ವ- ಬಂಧುತ್ವದ” ಬಗ್ಗೆ ಕಾರ್ಯಕ್ರಮ, ಮೀಲಾದ್ ಸಂದೇಶ ಸಭೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!