July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ ಮಾಡಲಾಯಿತು.

ಚುನಾವಣಾ ಅಧಿಸೂಚನೆ,ನಾಮಪತ್ರ ಸಲ್ಲಿಕೆ,ಪರಿಶೀಲನೆ, ಚಿಹ್ನೆ ಗಳ ವಿತರಣೆ, ಚುನಾವಣಾ ಪ್ರಚಾರ ಪ್ರಕ್ರಿಯೆಗಳು ನಡೆದು,ಚುನಾವಣೆಯ ದಿನ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಶಿಸ್ತಿನಿಂದ ಬಂದು,ತಮ್ಮ ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು.


ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸುವ ಇವಿಎಂ ಮಾದರಿಯ ಮೊಬೈಲ್ ಆ್ಯಪ್ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿ ಸಂಭ್ರಮ ಪಟ್ಟರು. ಮತ ಚಲಾಯಿಸಿದ ವಿದ್ಯಾರ್ಥಿಗಳ ಬೆರಳಿಗೆ ಇಂಕ್ ಗುರುತು ಹಾಕಲಾಯಿತು. ಮತ ಎಣಿಕೆಯನ್ನು ಸಹ ಕ್ರಮಬದ್ಧವಾಗಿ ನಡೆಸಲಾಯಿತು.


ಶಾಲಾ ವಿದ್ಯಾರ್ಥಿ ನಾಯಕನಾಗಿ ಮನ್ವಿತ್ ಎಂ.ಎಸ್,ಉಪನಾಯಕನಾಗಿ ಚಿರಾಗ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಧ್ಯಾ,ಆರೋಗ್ಯ ಮಂತ್ರಿಯಾಗಿ ಪ್ರೀತೇಶ್, ಆಹಾರ ಮತ್ತು ಗ್ರಂಥಾಲಯ ಮಂತ್ರಿಯಾಗಿ ಅದ್ವಿತ್,ಕ್ರೀಡಾ ಮಂತ್ರಿಯಾಗಿ ಪ್ರಣಮ್ಯ,ನೀರಾವರಿ ಮಂತ್ರಿಯಾಗಿ ವೀಕ್ಷಿತಾ, ವಾರ್ತಾ ಮಂತ್ರಿಯಾಗಿ ಶ್ರೇಯಾ,ಸ್ವಚ್ಚತಾ ಮಂತ್ರಿಯಾಗಿ ತೃಷಾ,ತೋಟಗಾರಿಕೆ ಮಂತ್ರಿಯಾಗಿ ಆದಿತ್ಯ ಹಾಗೂ ವಿರೋಧ ಪಕ್ಷದ ನಾಯಕರಾಗಿ ತನ್ವಿ ಮತ್ತು ಶ್ರಾವಣಿ ಆಯ್ಕೆಯಾದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎಂ.ರ ಮಾರ್ಗದರ್ಶನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕರಾದ ಹರಿಣಾಕ್ಷಿ ಎನ್, ಕರಿಯಣ್ಣ ಗೌಡ ಸಹಕರಿಸಿದರು.

Related posts

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
error: Content is protected !!