25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ ಮಾಡಲಾಯಿತು.

ಚುನಾವಣಾ ಅಧಿಸೂಚನೆ,ನಾಮಪತ್ರ ಸಲ್ಲಿಕೆ,ಪರಿಶೀಲನೆ, ಚಿಹ್ನೆ ಗಳ ವಿತರಣೆ, ಚುನಾವಣಾ ಪ್ರಚಾರ ಪ್ರಕ್ರಿಯೆಗಳು ನಡೆದು,ಚುನಾವಣೆಯ ದಿನ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಶಿಸ್ತಿನಿಂದ ಬಂದು,ತಮ್ಮ ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು.


ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸುವ ಇವಿಎಂ ಮಾದರಿಯ ಮೊಬೈಲ್ ಆ್ಯಪ್ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿ ಸಂಭ್ರಮ ಪಟ್ಟರು. ಮತ ಚಲಾಯಿಸಿದ ವಿದ್ಯಾರ್ಥಿಗಳ ಬೆರಳಿಗೆ ಇಂಕ್ ಗುರುತು ಹಾಕಲಾಯಿತು. ಮತ ಎಣಿಕೆಯನ್ನು ಸಹ ಕ್ರಮಬದ್ಧವಾಗಿ ನಡೆಸಲಾಯಿತು.


ಶಾಲಾ ವಿದ್ಯಾರ್ಥಿ ನಾಯಕನಾಗಿ ಮನ್ವಿತ್ ಎಂ.ಎಸ್,ಉಪನಾಯಕನಾಗಿ ಚಿರಾಗ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಧ್ಯಾ,ಆರೋಗ್ಯ ಮಂತ್ರಿಯಾಗಿ ಪ್ರೀತೇಶ್, ಆಹಾರ ಮತ್ತು ಗ್ರಂಥಾಲಯ ಮಂತ್ರಿಯಾಗಿ ಅದ್ವಿತ್,ಕ್ರೀಡಾ ಮಂತ್ರಿಯಾಗಿ ಪ್ರಣಮ್ಯ,ನೀರಾವರಿ ಮಂತ್ರಿಯಾಗಿ ವೀಕ್ಷಿತಾ, ವಾರ್ತಾ ಮಂತ್ರಿಯಾಗಿ ಶ್ರೇಯಾ,ಸ್ವಚ್ಚತಾ ಮಂತ್ರಿಯಾಗಿ ತೃಷಾ,ತೋಟಗಾರಿಕೆ ಮಂತ್ರಿಯಾಗಿ ಆದಿತ್ಯ ಹಾಗೂ ವಿರೋಧ ಪಕ್ಷದ ನಾಯಕರಾಗಿ ತನ್ವಿ ಮತ್ತು ಶ್ರಾವಣಿ ಆಯ್ಕೆಯಾದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎಂ.ರ ಮಾರ್ಗದರ್ಶನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕರಾದ ಹರಿಣಾಕ್ಷಿ ಎನ್, ಕರಿಯಣ್ಣ ಗೌಡ ಸಹಕರಿಸಿದರು.

Related posts

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya
error: Content is protected !!