27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

ಬೆಳ್ತಂಗಡಿ: ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮನವಿ ಸಲ್ಲಿಸಿದರು.

ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9/11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ.

ಗ್ರಾಮೀಣ ಪ್ರದೇಶದ 9/11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
error: Content is protected !!