23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

ಬೆಳ್ತಂಗಡಿ: ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮನವಿ ಸಲ್ಲಿಸಿದರು.

ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9/11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ.

ಗ್ರಾಮೀಣ ಪ್ರದೇಶದ 9/11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಮುಗುಳಿ ವಸತಿ ನಿಲಯದ ಬಳಿ ಅಡಿಕೆ ತೋಟದಲ್ಲಿ ಚಿರತೆ ಪತ್ತೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya
error: Content is protected !!