September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

ಬೆಳ್ತಂಗಡಿ: ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮನವಿ ಸಲ್ಲಿಸಿದರು.

ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9/11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ.

ಗ್ರಾಮೀಣ ಪ್ರದೇಶದ 9/11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya
error: Content is protected !!