July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

ಬೆಳ್ತಂಗಡಿ: ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮನವಿ ಸಲ್ಲಿಸಿದರು.

ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9/11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ.

ಗ್ರಾಮೀಣ ಪ್ರದೇಶದ 9/11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya
error: Content is protected !!