23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್‌ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಪ್ರಮೋದ್‌ ದಿಡುಪೆಗೂ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು.

ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.ಬಂಧನ 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದ್ದಾರೆ. ಶಶಿರಾಜ್ ಶೆಟ್ಟಿ ಪರ ನ್ಯಾಯವಾದಿ ಮಹೇಶ್ ಕಜೆ ಕೋರ್ಟ್ ನಲ್ಲಿ ವಾದಿಸಿದರು.

ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ ಪ್ರಮೋದ್‌ ದಿಡುಪೆ ಪ್ರಕರಣದ ಬಳಿಕ ತಲೆಮರೆಕೊಂಡಿದ್ದ ಆತನಿಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಪ್ರಮೋದ್ ದಿಡುಪೆ ಪರ ವಕೀಲರಾದ ಶಂಭು ಶರ್ಮ ಮತ್ತು ಅಜಯ್‌ ಸುವರ್ಣ ವಾದಿಸಿದರು.

Related posts

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya
error: Content is protected !!