September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಕಳೆಂಜ : ಜೆಸಿಐ ಕೊಕ್ಕಡ ಕಪಿಲಾ ಘಟಕ, ಅರಣ್ಯ ಇಲಾಖೆ ಉಪ್ಪಿನಂಗಡಿ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ, ಮತ್ತು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನಾ ಸಹಭಾಗಿತ್ವದಲ್ಲಿ, ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಗಿಡ ನೆಡುವ ಕಾರ್ಯಕ್ರಮಕ್ಕೆ ಉಪ್ಪಿನಂಗಡಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಳೆದ ವರ್ಷವೂ ಸಹ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೇಡಲಾಗಿತ್ತು ಕಳೆದ ವರ್ಷ ನೆಟ್ಟ ಗಿಡಗಳನ್ನು ನೋಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್ ಕಾಯಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕರಕಾರದ ರವೀಂದ್ರ , ಕಳೆoಜ. ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ. ಕೆ, ಅರಣ್ಯ ವೀಕ್ಷಕರು ವಿನಯ್ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಶ್ರೀಮತಿ ಗೌರಿ ಪಂಚಮಿಪಾದೆ, ಗೋವಿಂದ ಗೌಡ ಪಂಚಮಿಪಾದೆ, ಪ್ರಸನ್ನ ಆಚಾರ್ ಕಲ್ಲಡ್ಕ ಹಾಗೂ ಅವರ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya
error: Content is protected !!