30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ ಮಾಡಲಾಯಿತು.

ಚುನಾವಣಾ ಅಧಿಸೂಚನೆ,ನಾಮಪತ್ರ ಸಲ್ಲಿಕೆ,ಪರಿಶೀಲನೆ, ಚಿಹ್ನೆ ಗಳ ವಿತರಣೆ, ಚುನಾವಣಾ ಪ್ರಚಾರ ಪ್ರಕ್ರಿಯೆಗಳು ನಡೆದು,ಚುನಾವಣೆಯ ದಿನ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಶಿಸ್ತಿನಿಂದ ಬಂದು,ತಮ್ಮ ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು.


ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸುವ ಇವಿಎಂ ಮಾದರಿಯ ಮೊಬೈಲ್ ಆ್ಯಪ್ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿ ಸಂಭ್ರಮ ಪಟ್ಟರು. ಮತ ಚಲಾಯಿಸಿದ ವಿದ್ಯಾರ್ಥಿಗಳ ಬೆರಳಿಗೆ ಇಂಕ್ ಗುರುತು ಹಾಕಲಾಯಿತು. ಮತ ಎಣಿಕೆಯನ್ನು ಸಹ ಕ್ರಮಬದ್ಧವಾಗಿ ನಡೆಸಲಾಯಿತು.


ಶಾಲಾ ವಿದ್ಯಾರ್ಥಿ ನಾಯಕನಾಗಿ ಮನ್ವಿತ್ ಎಂ.ಎಸ್,ಉಪನಾಯಕನಾಗಿ ಚಿರಾಗ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಧ್ಯಾ,ಆರೋಗ್ಯ ಮಂತ್ರಿಯಾಗಿ ಪ್ರೀತೇಶ್, ಆಹಾರ ಮತ್ತು ಗ್ರಂಥಾಲಯ ಮಂತ್ರಿಯಾಗಿ ಅದ್ವಿತ್,ಕ್ರೀಡಾ ಮಂತ್ರಿಯಾಗಿ ಪ್ರಣಮ್ಯ,ನೀರಾವರಿ ಮಂತ್ರಿಯಾಗಿ ವೀಕ್ಷಿತಾ, ವಾರ್ತಾ ಮಂತ್ರಿಯಾಗಿ ಶ್ರೇಯಾ,ಸ್ವಚ್ಚತಾ ಮಂತ್ರಿಯಾಗಿ ತೃಷಾ,ತೋಟಗಾರಿಕೆ ಮಂತ್ರಿಯಾಗಿ ಆದಿತ್ಯ ಹಾಗೂ ವಿರೋಧ ಪಕ್ಷದ ನಾಯಕರಾಗಿ ತನ್ವಿ ಮತ್ತು ಶ್ರಾವಣಿ ಆಯ್ಕೆಯಾದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎಂ.ರ ಮಾರ್ಗದರ್ಶನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕರಾದ ಹರಿಣಾಕ್ಷಿ ಎನ್, ಕರಿಯಣ್ಣ ಗೌಡ ಸಹಕರಿಸಿದರು.

Related posts

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya
error: Content is protected !!