ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಜೂ13 ರಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತು.


ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಉಪಧ್ಯಾಕ್ಷರಾದ ಗುರು ಬಂಟ್ವಾಳ, ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಆತ್ತಾಜೆ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಜಯಾನಂದ ಕಲ್ಮಂಜ, ರಾಘವ ಕಲ್ಮಂಜ, ಇವರುಗಳು ಭಾಗವಹಿಸಿದರು











