ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12 ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು .ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಇವಿಎಮ್ ಮೆಷಿನ್ ಆಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು .

Leave a Comment

error: Content is protected !!