September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!