23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
error: Content is protected !!