September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!