25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

ಸುಲ್ಕೇರಿ: ಶ್ರೀರಾಮ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ ಮತ್ತು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.


ಎಲ್ಲಾ ಪೂಜಾ ವಿಧಿವಿಧಾನಗಳ ನಂತರ ಶಿಶುಮಂದಿರದ ನೂತನ ಕುಟೀರವನ್ನು ರಾಷ್ಟ್ರೀಯ ಸ್ವಯಸೇವಕ ಸಂಘ ಮಂಗಳೂರು ವಿಭಾಗ ಮಾನ್ಯ ಸಂಘ ಚಾಲಕರು ಡಾ. ನಾರಾಯಣ ಶೆಣೈ ಭಾರತಾಂಬೆಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಕಳ ಕಮಲಾಕ್ಷ ಕಾಮತ್ ಶಿಶುಮಂದಿರದ ಬಳಿ ಪ್ರತಿಷ್ಠಾಪಿಸಿದ ಸರಸ್ವತಿ ವಿಗ್ರಹವನ್ನು ಅನಾವರಣ ಮಾಡಿದರು. ಶಿಶುಮಂದಿರದ ಪುಟಾಣಿಗಳಿಗೆ ಆರತಿ ಬೆಳಗಿ ತಿಲಕ ಇಟ್ಟು ಸಿಹಿ ನೀಡಲಾಯಿತು ವಿಧ್ಯಾರ್ಥಿಗಳು ಶಿಶುಮಂದಿರದ ನೂತನ ಕುಟೀರದ ಹೊಸ್ತಿಲಿಗೆ ನಮಸ್ಕಾರ ಮಾಡಿ ಒಳಗೆ ಪ್ರವೇಶ ಮಾಡಿದರು. ನಂತರ ಎಮ್.ಆರ್.ಪಿ.ಎಲ್ ನ ಸಿಎಸ್ಆರ್ ಮೂಲಕ ನಿರ್ಮಿಸಲಾದ 4 ಕೊಠಡಿಗಳ ನೂತನ ಕಟ್ಟಡವನ್ನು ಎಮ್.ಆರ್.ಪಿ.ಎಲ್ ನ ಹಿರಿಯ ಅಧಿಕಾರಿ ಪ್ರದೀಪ್ ಉದ್ಘಾಟಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ಸಭಕಾರ್ಯಕ್ರಮ ನಡೆಯಿತು,

ವೇದಿಕೆಯಲ್ಲಿ ಎಮ್.ಆರ್.ಪಿ.ಎಲ್ ನ ಅಧಿಕಾರಿ ಪ್ರದೀಪ್ ಸೇರಿದಂತೆ ಪ್ರಮುಕ ದಾನಿಗಳನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಾರ್ಕಳ ಕಮಲಾಕ್ಷ ಕಾಮತ್, ಡಾ.ರವೀಂದ್ರ ಶೆಟ್ಟಿ ಅಧ್ಯಕ್ಷರು ರಾಜ್ಯ ಕೃಷರ್ ಮಾಲೀಕರ ಸಂಘ ಬಜಗೋಳಿ, ಶಾಲಾ ಆಡಳಿತ ಮಂಡಳಿ ಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹಾಗೂ ಅಧ್ಯಕ್ಷರಾದ ರಾಜು ಪೂಜಾರಿ ಉಪಸ್ಥಿತರಿದ್ದರು.

Related posts

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!