July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

ಸುಲ್ಕೇರಿ: ಶ್ರೀರಾಮ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ ಮತ್ತು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.


ಎಲ್ಲಾ ಪೂಜಾ ವಿಧಿವಿಧಾನಗಳ ನಂತರ ಶಿಶುಮಂದಿರದ ನೂತನ ಕುಟೀರವನ್ನು ರಾಷ್ಟ್ರೀಯ ಸ್ವಯಸೇವಕ ಸಂಘ ಮಂಗಳೂರು ವಿಭಾಗ ಮಾನ್ಯ ಸಂಘ ಚಾಲಕರು ಡಾ. ನಾರಾಯಣ ಶೆಣೈ ಭಾರತಾಂಬೆಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಕಳ ಕಮಲಾಕ್ಷ ಕಾಮತ್ ಶಿಶುಮಂದಿರದ ಬಳಿ ಪ್ರತಿಷ್ಠಾಪಿಸಿದ ಸರಸ್ವತಿ ವಿಗ್ರಹವನ್ನು ಅನಾವರಣ ಮಾಡಿದರು. ಶಿಶುಮಂದಿರದ ಪುಟಾಣಿಗಳಿಗೆ ಆರತಿ ಬೆಳಗಿ ತಿಲಕ ಇಟ್ಟು ಸಿಹಿ ನೀಡಲಾಯಿತು ವಿಧ್ಯಾರ್ಥಿಗಳು ಶಿಶುಮಂದಿರದ ನೂತನ ಕುಟೀರದ ಹೊಸ್ತಿಲಿಗೆ ನಮಸ್ಕಾರ ಮಾಡಿ ಒಳಗೆ ಪ್ರವೇಶ ಮಾಡಿದರು. ನಂತರ ಎಮ್.ಆರ್.ಪಿ.ಎಲ್ ನ ಸಿಎಸ್ಆರ್ ಮೂಲಕ ನಿರ್ಮಿಸಲಾದ 4 ಕೊಠಡಿಗಳ ನೂತನ ಕಟ್ಟಡವನ್ನು ಎಮ್.ಆರ್.ಪಿ.ಎಲ್ ನ ಹಿರಿಯ ಅಧಿಕಾರಿ ಪ್ರದೀಪ್ ಉದ್ಘಾಟಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ಸಭಕಾರ್ಯಕ್ರಮ ನಡೆಯಿತು,

ವೇದಿಕೆಯಲ್ಲಿ ಎಮ್.ಆರ್.ಪಿ.ಎಲ್ ನ ಅಧಿಕಾರಿ ಪ್ರದೀಪ್ ಸೇರಿದಂತೆ ಪ್ರಮುಕ ದಾನಿಗಳನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಾರ್ಕಳ ಕಮಲಾಕ್ಷ ಕಾಮತ್, ಡಾ.ರವೀಂದ್ರ ಶೆಟ್ಟಿ ಅಧ್ಯಕ್ಷರು ರಾಜ್ಯ ಕೃಷರ್ ಮಾಲೀಕರ ಸಂಘ ಬಜಗೋಳಿ, ಶಾಲಾ ಆಡಳಿತ ಮಂಡಳಿ ಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹಾಗೂ ಅಧ್ಯಕ್ಷರಾದ ರಾಜು ಪೂಜಾರಿ ಉಪಸ್ಥಿತರಿದ್ದರು.

Related posts

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya
error: Content is protected !!