March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.


ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 16 ನೇ ವರ್ಷದ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳನ್ನು ಜೂ.14 ರಂದು ವಿತರಿಸಿ ಅವರು ಮಾತನಾಡಿದರು.


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ವಹಿಸಿದ್ದರು.
ಪುಸ್ತಕಗಳ ದಾನಿಗಳಾದ ದಂತ ವೈದ್ಯ ಡಾl ಶಶಿಧರ ಡೋಂಗ್ರೆ, ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಡಾl ಸುಷ್ಮಾ ಡೋಂಗ್ರೆ, ಜ್ಯೋತಿ ಪ್ರತಾಪಸಿಂಹ ನಾಯಕ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರವೀಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.
ಡಾl ಡೋಂಗ್ರೆಯವರು ಅಕ್ಷರ ದಾಸೋಹಕ್ಕೆ 16 ಲೀ.ಸಾಮರ್ಥ್ಯದ ಕುಕ್ಕರ್‌ನ್ನು ಕೊಡುಗೆಯಾಗಿಯೂ ನೀಡಿದರು. ನಾಯಕ್ ಅವರು ಶಾಲಾಭಿವೃದ್ಧಿಗೆ ರೂ.5,000 ದೇಣಿಗೆ ನೀಡಿದರು. ಶಾಲಾ ಹಳೆವಿದ್ಯಾರ್ಥಿ ಕೃಷ್ಣ ಆಠವಳೆ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಕ್ಕೆ ಅವರನ್ನು ಪುರಸ್ಕರಿಸಲಾಯಿತು.


ಶಾಲಾ‌ ಮುಖ್ಯೋಪಾಧ್ಯಾಯಿನಿ ಲೀನಾ ಮೋರಾಸ್ ಸ್ವಾಗತಿಸಿ ವಂದಿಸಿದರು. ದೀಪಕ ಆಠವಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!