24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಜೂ.13 ರಂದು ಯೋಗ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿ, ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ (ಎಸ್.ಡಿ.ಎಂ. ಸಿ.ಎನ್.ವೈ.ಎಸ್.)ದ ಪ್ರಾಧ್ಯಾಪಕಿ ಡಾ. ಸುಜಾತ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯೋಗದ ಆಯಾಮಗಳು, ಮಹತ್ವ, ದೇಹದ ಇರುವಿಕೆಗೆ ಕಾರಣವಾದ ಅಂಶಗಳನ್ನು ಉಪನಿಷತ್ ನ ಭೃಗು ಮಹರ್ಷಿಯ ಕಥೆ ಮೂಲಕ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ನಿತ್ಯ ಯೋಗಾಭ್ಯಾಸ ಮಾಡುವುದು ಬಹಳ ಮುಖ್ಯ ಎಂದರು.

ಎಸ್.ಡಿ.ಎಂ.ಸಿ.ಎನ್.ವೈ.ಎಸ್. ವಿದ್ಯಾರ್ಥಿಗಳಾದ ವರ್ಷ ಮತ್ತು ಸಂಹಿತ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಿ ತಸ್ಮಯಿ ವಿಶ್ವ ಯೋಗ ದಿನದ ಕುರಿತು ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಐಶ್ವರ್ಯ ಸ್ವಾಗತಿಸಿ, ದೀಪಿಕ ಅತಿಥಿ ಪರಿಚಯ ನೀಡಿ, ಶೈಮ ವಂದಿಸಿದರು.

Related posts

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya
error: Content is protected !!