25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಜೂ.13 ರಂದು ಯೋಗ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿ, ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ (ಎಸ್.ಡಿ.ಎಂ. ಸಿ.ಎನ್.ವೈ.ಎಸ್.)ದ ಪ್ರಾಧ್ಯಾಪಕಿ ಡಾ. ಸುಜಾತ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯೋಗದ ಆಯಾಮಗಳು, ಮಹತ್ವ, ದೇಹದ ಇರುವಿಕೆಗೆ ಕಾರಣವಾದ ಅಂಶಗಳನ್ನು ಉಪನಿಷತ್ ನ ಭೃಗು ಮಹರ್ಷಿಯ ಕಥೆ ಮೂಲಕ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ನಿತ್ಯ ಯೋಗಾಭ್ಯಾಸ ಮಾಡುವುದು ಬಹಳ ಮುಖ್ಯ ಎಂದರು.

ಎಸ್.ಡಿ.ಎಂ.ಸಿ.ಎನ್.ವೈ.ಎಸ್. ವಿದ್ಯಾರ್ಥಿಗಳಾದ ವರ್ಷ ಮತ್ತು ಸಂಹಿತ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಿ ತಸ್ಮಯಿ ವಿಶ್ವ ಯೋಗ ದಿನದ ಕುರಿತು ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಐಶ್ವರ್ಯ ಸ್ವಾಗತಿಸಿ, ದೀಪಿಕ ಅತಿಥಿ ಪರಿಚಯ ನೀಡಿ, ಶೈಮ ವಂದಿಸಿದರು.

Related posts

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya
error: Content is protected !!