ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಮೊದಲ ಹೆತ್ತವರ/ಪೋಷಕರ ಸಭೆ ಯನ್ನು ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ದಿಗ್ಧರ್ಶಕರಾದ ಶ್ರೀ ಮಾಯಿಲ್ತೊಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್, ಖಜಾಂಜಿಗಳಾದ ಶಿವ ಪ್ರಸಾದ್, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪೋಷಕರನ್ನು ಸ್ವಾಗತಿಸಿ ಶೈಕ್ಷಣಿಕ ವಿಚಾರಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಹೆತ್ತವರೊಂದಿಗೆ ಹಂಚಿಕೊಂಡರು. ಶಿಕ್ಷಕ ವೃಂದ ದವರು ಹಾಜರಿದ್ದರು.

Leave a Comment

error: Content is protected !!