23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

ಕಾಶಿಪಟ್ಣ: ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಲ್ಲಿಸುವ ಗೌರವ ಪ್ರೇರಣೆಯಾಗಿ ಮಾರ್ಪಡುತ್ತದೆ. ಆ ಮೂಲಕ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಊರ ಶಿಕ್ಷಣ ಸಂಸ್ಥೆಯನ್ನು ಉಳಿಸಿ ಬೆಳೆಸಲು ಊರಿನ ಸಮಸ್ತ ನಾಗರೀಕರು ಏಕ ಮನಸ್ಸಿನಿಂದ ಶ್ರಮಿಸಬೇಕೆಂದು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ಸ.ಪ್ರೌ. ಶಾಲೆ ಕಾಶಿಪಟ್ಣದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ನಡೆದ 2023-24 ನೇ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿ ಕರೆ ನೀಡಿದರು.

ಅಂಡಿಂಜೆ ಶಾಲಾ ಮುಖ್ಯ ಶಿಕ್ಷಕ ಶಿವಶಂಕರ ಭಟ್ ಅಭಿನಂದನ ಭಾಷಣ ಮಾಡಿ ಶೇಕಡಾ 100 ಫಲಿತಾಂಶ ದಾಖಲಿಸಲು ಕಾರಣಕರ್ತರಾದ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ವಿಶೇಷವಾಗಿ ಮಹತ್ತರ ಜವಾಬ್ದಾರಿ ನಿರ್ವಹಿಸಿದ ಪೋಷಕರನ್ನು ಪ್ರಶಂಸಿಸಿದರು. ನಂತರ ಶೇಕಡಾ 100 ಫಲಿತಾಂಶ ದಾಖಲಿಸಿದ ಎಲ್ಲಾ ವಿದ್ಯಾರ್ಥಿಗಳನ್ನು, ಶ್ರಮಿಸಿದ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯವರನ್ನು ಗೌರವಿಸಲಾಯಿತು.

ಶಾಲಾ ಸುಣ್ಣ ಬಣ್ಣ ಮತ್ತು ಆಟದ ಮೈದಾನ ಸಮತಟ್ಟು ಕಾಮಗಾರಿಗೆ ಅನುದಾನ ನೀಡಿದ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ ಮತ್ತು ಉಪಾಧ್ಯಕ್ಷೆ ಶ್ರೀಮತಿ ಶುಭವಿ ಇವರನ್ನು ಶಾಲಾ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಯಶೋಧರ ಪೂಜಾರಿ ಶಾಲಾ ಪರವಾಗಿ ಗೌರವಿಸಿದರು. ಇತ್ತೀಚೆಗೆ ಅಗಲಿದ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಇವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನಪ್ರಾರ್ಥನೆ ಮಾಡಲಾಯಿತು.

ಸತೀಶ್ ಕೆ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶಿಲ್ಪಾ, ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಜೈನ್, ರವೀಂದ್ರ, ಪಿಡಿಒ ಶ್ರೀಮತಿ ಆಶಾಲತಾ, ಕಾರ್ಯದರ್ಶಿ ಲೀನಾ ಬೆನಡಿಕ್ಟಾ ಲೋಬೋ, ಸಿ.ಆರ್.ಪಿ ಆರತಿ, ಶಾಲಾ ಸ್ಥಾಪಕ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಪ್ರವೀಣ್ ಪಿಂಟೋ, ಮಾವಿನಕಟ್ಟೆ ಶಾಲಾ ಮುಖ್ಯ ಶಿಕ್ಷಕ ಉಮೇಶ್ ನಾಯ್ಕ್, ಅಧ್ಯಾಪಕ ವೆಂಕಟೇಶ್ ನಾಯ್ಕ್, ಊರ ಹಿರಿಯರಾದ ಸುಬ್ಬಣ್ಣ ಪೂಜಾರಿ, ಸ್ಥಳೀಯ ಮಸೀದಿ ಅಧ್ಯಕ್ಷ ಕೆ.ಎಸ್ ಪುತ್ತುಮೋನು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಶಿಕ್ಷಕ ದೇವುದಾಸ್ ನಾಯಕ್ ನಿರೂಪಿಸಿ ಶಿಕ್ಷಕಿ ಸೌಮ್ಯ ವಂದಿಸಿದರು.

Related posts

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!