July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12 ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು .ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಇವಿಎಮ್ ಮೆಷಿನ್ ಆಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು .

Related posts

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!