April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya
error: Content is protected !!