23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!