23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!