September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya

ಸಿಯೋನ್ ಆಶ್ರಮದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya
error: Content is protected !!