23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya
error: Content is protected !!