23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಇತ್ತೀಚೆಗೆ ಶ್ರೀ ಮಂಜುನಾಥೇಶ್ವರ ಸಭಾಭವನ ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿ ನೆರವೇರಿತ್ತು.

ಈ ಸಂಧರ್ಭದಲ್ಲಿ ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗೀರಿ ಸಂಸ್ಥಾನ ಮಠಾಧ್ಯಾಕ್ಷರಾದ ಶಕ್ತಿವಿಶಿಷ್ಟಾದ್ವೈತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ .ಷ.ಬ್ರ. ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ಕವಲೇ ದುರ್ಗ ತೀರ್ಥಹಳ್ಳಿ ತಾಲೂಕು ಶಿವಮೊಗ್ಗ ಜಿಲ್ಲೆ ಇವರ ಶುಭ ಆರ್ಶಿವಾದದಿಂದ ಕಾರ್ಯಕ್ರಮ ನೇರವೇರಿತ್ತು.

ಸಮಾಜದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ, ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ, ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ್ ಬೆಳ್ತಂಗಡಿ, ಕೋಶಾಧಿಕಾರಿ ಲೀಲಾಧರ ಕಿಲ್ಲೂರು, ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಮಂಜುಳ ಸತೀಶ್, ಕಾರ್ಯದರ್ಶಿ ಶ್ರೀಮತಿ ಆಶ್ವಿನಿ ದಿನೇಶ್, ಕೋಶಾಧಿಕಾರಿ ಶ್ರೀಮತಿ ಮಮತ ರವೀಂದ್ರ ಹಾಗೂ ಸಮಾಜ ಭಾಂಧವರು ಭಾಗವಹಿಸಿದರು.

ಈ ಸಂಧರ್ಭದಲ್ಲಿ ಮೋಹನ್ ಬೆಳ್ತಂಗಡಿ ಸಾರಥ್ಯದ ಸಪ್ತಸ್ವರಗಳ ಗಾನಯಾನ ಕಾರ್ಯಕ್ರಮ ಮತ್ತು ಸಮಾಜ ಭಾಂದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತ್ತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya
error: Content is protected !!