25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

ಬೆಳ್ತಂಗಡಿ: ನಿಮ್ಮ ಮಗ ರೇಪ್ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾನೆ ಎಂದು ಪೋಷಕರಿಗೆ ವಿದೇಶಿ ಕರೆ ಬಂದಿರುವ ಘಟನೆ ಜೂ. 11ರಂದು ಪಟ್ರಮೆಯಲ್ಲಿ ನಡೆದಿದೆ. ಕಳೆದ ಮೂರಾಲ್ಕು ದಿನಗಳಿಂದ ಕರಾವಳಿಯ ಹಲವು ಮಂದಿಗೆ ಇಂತಹದೇ ರೀತಿಯ ಕರೆಗಳು ಬರುತ್ತಿದ್ದು, ಪೋಷಕರು ಆತಂಕಕ್ಕೆ ಒಳಗಾದ ಘಟನೆಗಳು ಸಂಭವಿಸಿವೆ.

ಧರ್ಮಸ್ಥಳದ ಪಟ್ರಮೆ ನಿವಾಸಿ ಸುನಿಲ್ ಮತ್ತು ಅನುಪಮಾ ಅವರ ಪುತ್ರ ಮಂಗಳೂರಿನಲ್ಲಿ ಕಾಲೇಜಿನಲ್ಲಿ ಓದುತ್ತಿದ್ದು ಜೂ. 11ರಂದು 10.30ರ ವೇಳೆಗೆ ಪೋಷಕರಿಗೆ ವಿದೇಶಿ ನಂಬರ್‌ ನಿಂದ ವಾಟ್ಸ್ ಆ್ಯಪ್ ಕರೆ ಬಂದಿತ್ತು.

ಮಗನ ಶಾಲಾ ದಾಖಲಾತಿಗಳಲ್ಲಿ ತಾಯಿಯ ನಂಬ‌ರ್ ನೀಡಲಾಗಿತ್ತು. ಅದೇ ಸಂಖ್ಯೆಗೆ ಫೋನ್ ಕರೆ ಬಂದಿತ್ತು. ಮಹಿಳೆ ಜತೆ ಮಾತನಾಡಿದ ವ್ಯಕ್ತಿ ತಂದೆಯ ಹೆಸರು ಹೇಳಿ ಬಳಿಕ ಮಗನ ಹೆಸರು ಹೇಳಿದರು. ನಿಮ್ಮ ಮಗ ರೇಪ್ ಕೇಸ್ ನಲ್ಲಿ ಸಿಕ್ಕಿ ಬಿದ್ದಿದ್ದಾನೆ. ರಾಜಿಗೆ ಬರುತ್ತಿರಾ? ಅಂತ ಕೇಳಿದನು. ವಿಚಾರ ತಿಳಿದು ಒಮ್ಮೆಗೆ ಆಘಾತಕ್ಕೊಳಗಾದ ತಾಯಿ ಧೃತಿಗೆಡದೆ ಕರೆಮಾಡಿದವರನ್ನು ಸರಿಯಾಗಿ ವಿಚಾರಿಸುವ ಪ್ರಯತ್ನ ಮಾಡಿದರು. ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಪತಿ ಕೂಡ ಅವರಲ್ಲಿ ಮಾತನಾಡಿದ್ದರು. ಇದು ನಕಲಿ ಕರೆ ಇರಬಹುದೆಂದು ಅದನ್ನು ಕಟ್ ಮಾಡಿದ ಬಳಿಕ ವಂಚಕರು ಮತ್ತೆ ಕರೆ ಮಾಡಿದರು.

ಆಗ ಆತ, ‘ಪೊಲೀಸರ ಕರೆಯನ್ನೇ ಫ್ರಾಡ್ ಅಂತ ಹೇಳುವಷ್ಟು ಧೈರ್ಯವೇ ನಿಮಗೆ?’ ಎಂದು ಕೇಳಿದ್ದಾರಂತೆ. ಇಷ್ಟಕ್ಕೂ ಮಗ ಕಿಡ್ನಾಪ್ ಆಗಿದ್ದು ನಿಜಾನ ಅಂತ ನೋಡೋಕೆ ಮಗನಿಗೆ ಕಾಲ್ ಕೊಡುವಂತೆ ಪೋಷಕರು ತಿಳಿಸಿದರು. ಆಗ ಇವರ ಮಗ ಅಳುವ ಹಾಗೆ ಆ ಕಡೆಯಿಂದ ಅಳುವ ಧ್ವನಿ ಕೇಳಿಸಿತ್ತು. ಆಗ ಇದು ವಂಚಕರ ಕರೆ ಎಂಬುದನ್ನು ಅರಿತು ಅವರನ್ನೇ ತರಾಟೆಗೆ ತೆಗೆದುಕೊಂಡರು. ಅನಂತರ ಬೆಂಗಳೂರಿನಲ್ಲಿ ನಮ್ಮ ಸಂಬಂಧಿಕರು ಪೊಲೀಸ್ ಆಗಿದ್ದು, ಅವರಿಗೆ ನಿಮ್ಮ ಫೋನ್ ನಂಬರ್ ಕೊಡುತ್ತೇವೆ ಅವರು ಮಾತನಾಡುತ್ತಾರೆ ಎಂಬುದಾಗಿ ಹೇಳಿದಾಕ್ಷಣ ವಂಚಕರು ಕರೆ ಕಟ್ ಮಾಡಿದರು ಎಂದು ವಿವರಿಸಿದರು. ಅವರ ಕರೆಯಲ್ಲಿ ಪೊಲೀಸ್ ವ್ಯಕ್ತಿಯೊಬ್ಬರ ಪ್ರೊಫೈಲ್ ಬೇರೆ ಹಾಕಿದ್ದರು.

ಬಳಿಕ ದಂಪತಿ ಕಾಲೇಜಿಗೆ ಕರೆ ಮಾಡಿ ಮಗ ಕ್ಷೇಮವಾಗಿರುವ ವಿಚಾರವನ್ನು ದೃಢಪಡಿಸಿಕೊಂಡರು. ಜೂ.11 ಮತ್ತು 12ರಂದು ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ನಗರದ ಸೈಬರ್‌ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿವೆ. ಮಂಗಳೂರು ನಗರದ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಹಲವಾರು ವಿದ್ಯಾರ್ಥಿಗಳ ಪೋಷಕರಿಗೆ ಈ ರೀತಿಯ ಬೆದರಿಕೆಯ ಕರೆಗಳು ಬಂದಿವೆ. ಇದರಲ್ಲಿ ಹೆಚ್ಚಾಗಿ ಪೋಲಂಡ್ ಮತ್ತು ಪಾಕಿಸ್ಥಾನದಂತಹ ವಿದೇಶಿ ಸಂಖ್ಯೆಗಳನ್ನು ಹೊಂದಿದ್ದವು. ಪೋಷಕರನ್ನು ಬೆದರಿಸಿ ಹಣ ವಸೂಲಿ ಮಾಡಲಾಗಿದ್ದು ಪೋಷಕರು ಮತ್ತು ಸಂಸ್ಥೆಗಳು ಇಂತಹ ಕರೆಗಳಿಗೆ ಭಯಪಡಬೇಡಿ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya
error: Content is protected !!