24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

ಸುಲ್ಕೇರಿ: ಶ್ರೀರಾಮ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ ಮತ್ತು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.


ಎಲ್ಲಾ ಪೂಜಾ ವಿಧಿವಿಧಾನಗಳ ನಂತರ ಶಿಶುಮಂದಿರದ ನೂತನ ಕುಟೀರವನ್ನು ರಾಷ್ಟ್ರೀಯ ಸ್ವಯಸೇವಕ ಸಂಘ ಮಂಗಳೂರು ವಿಭಾಗ ಮಾನ್ಯ ಸಂಘ ಚಾಲಕರು ಡಾ. ನಾರಾಯಣ ಶೆಣೈ ಭಾರತಾಂಬೆಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಕಳ ಕಮಲಾಕ್ಷ ಕಾಮತ್ ಶಿಶುಮಂದಿರದ ಬಳಿ ಪ್ರತಿಷ್ಠಾಪಿಸಿದ ಸರಸ್ವತಿ ವಿಗ್ರಹವನ್ನು ಅನಾವರಣ ಮಾಡಿದರು. ಶಿಶುಮಂದಿರದ ಪುಟಾಣಿಗಳಿಗೆ ಆರತಿ ಬೆಳಗಿ ತಿಲಕ ಇಟ್ಟು ಸಿಹಿ ನೀಡಲಾಯಿತು ವಿಧ್ಯಾರ್ಥಿಗಳು ಶಿಶುಮಂದಿರದ ನೂತನ ಕುಟೀರದ ಹೊಸ್ತಿಲಿಗೆ ನಮಸ್ಕಾರ ಮಾಡಿ ಒಳಗೆ ಪ್ರವೇಶ ಮಾಡಿದರು. ನಂತರ ಎಮ್.ಆರ್.ಪಿ.ಎಲ್ ನ ಸಿಎಸ್ಆರ್ ಮೂಲಕ ನಿರ್ಮಿಸಲಾದ 4 ಕೊಠಡಿಗಳ ನೂತನ ಕಟ್ಟಡವನ್ನು ಎಮ್.ಆರ್.ಪಿ.ಎಲ್ ನ ಹಿರಿಯ ಅಧಿಕಾರಿ ಪ್ರದೀಪ್ ಉದ್ಘಾಟಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ಸಭಕಾರ್ಯಕ್ರಮ ನಡೆಯಿತು,

ವೇದಿಕೆಯಲ್ಲಿ ಎಮ್.ಆರ್.ಪಿ.ಎಲ್ ನ ಅಧಿಕಾರಿ ಪ್ರದೀಪ್ ಸೇರಿದಂತೆ ಪ್ರಮುಕ ದಾನಿಗಳನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಾರ್ಕಳ ಕಮಲಾಕ್ಷ ಕಾಮತ್, ಡಾ.ರವೀಂದ್ರ ಶೆಟ್ಟಿ ಅಧ್ಯಕ್ಷರು ರಾಜ್ಯ ಕೃಷರ್ ಮಾಲೀಕರ ಸಂಘ ಬಜಗೋಳಿ, ಶಾಲಾ ಆಡಳಿತ ಮಂಡಳಿ ಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹಾಗೂ ಅಧ್ಯಕ್ಷರಾದ ರಾಜು ಪೂಜಾರಿ ಉಪಸ್ಥಿತರಿದ್ದರು.

Related posts

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya
error: Content is protected !!