23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

ಸುಲ್ಕೇರಿ: ಶ್ರೀರಾಮ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ ಮತ್ತು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.


ಎಲ್ಲಾ ಪೂಜಾ ವಿಧಿವಿಧಾನಗಳ ನಂತರ ಶಿಶುಮಂದಿರದ ನೂತನ ಕುಟೀರವನ್ನು ರಾಷ್ಟ್ರೀಯ ಸ್ವಯಸೇವಕ ಸಂಘ ಮಂಗಳೂರು ವಿಭಾಗ ಮಾನ್ಯ ಸಂಘ ಚಾಲಕರು ಡಾ. ನಾರಾಯಣ ಶೆಣೈ ಭಾರತಾಂಬೆಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಕಳ ಕಮಲಾಕ್ಷ ಕಾಮತ್ ಶಿಶುಮಂದಿರದ ಬಳಿ ಪ್ರತಿಷ್ಠಾಪಿಸಿದ ಸರಸ್ವತಿ ವಿಗ್ರಹವನ್ನು ಅನಾವರಣ ಮಾಡಿದರು. ಶಿಶುಮಂದಿರದ ಪುಟಾಣಿಗಳಿಗೆ ಆರತಿ ಬೆಳಗಿ ತಿಲಕ ಇಟ್ಟು ಸಿಹಿ ನೀಡಲಾಯಿತು ವಿಧ್ಯಾರ್ಥಿಗಳು ಶಿಶುಮಂದಿರದ ನೂತನ ಕುಟೀರದ ಹೊಸ್ತಿಲಿಗೆ ನಮಸ್ಕಾರ ಮಾಡಿ ಒಳಗೆ ಪ್ರವೇಶ ಮಾಡಿದರು. ನಂತರ ಎಮ್.ಆರ್.ಪಿ.ಎಲ್ ನ ಸಿಎಸ್ಆರ್ ಮೂಲಕ ನಿರ್ಮಿಸಲಾದ 4 ಕೊಠಡಿಗಳ ನೂತನ ಕಟ್ಟಡವನ್ನು ಎಮ್.ಆರ್.ಪಿ.ಎಲ್ ನ ಹಿರಿಯ ಅಧಿಕಾರಿ ಪ್ರದೀಪ್ ಉದ್ಘಾಟಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ಸಭಕಾರ್ಯಕ್ರಮ ನಡೆಯಿತು,

ವೇದಿಕೆಯಲ್ಲಿ ಎಮ್.ಆರ್.ಪಿ.ಎಲ್ ನ ಅಧಿಕಾರಿ ಪ್ರದೀಪ್ ಸೇರಿದಂತೆ ಪ್ರಮುಕ ದಾನಿಗಳನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಾರ್ಕಳ ಕಮಲಾಕ್ಷ ಕಾಮತ್, ಡಾ.ರವೀಂದ್ರ ಶೆಟ್ಟಿ ಅಧ್ಯಕ್ಷರು ರಾಜ್ಯ ಕೃಷರ್ ಮಾಲೀಕರ ಸಂಘ ಬಜಗೋಳಿ, ಶಾಲಾ ಆಡಳಿತ ಮಂಡಳಿ ಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹಾಗೂ ಅಧ್ಯಕ್ಷರಾದ ರಾಜು ಪೂಜಾರಿ ಉಪಸ್ಥಿತರಿದ್ದರು.

Related posts

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!