July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

ಸುಲ್ಕೇರಿ: ಶ್ರೀರಾಮ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ ಮತ್ತು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.


ಎಲ್ಲಾ ಪೂಜಾ ವಿಧಿವಿಧಾನಗಳ ನಂತರ ಶಿಶುಮಂದಿರದ ನೂತನ ಕುಟೀರವನ್ನು ರಾಷ್ಟ್ರೀಯ ಸ್ವಯಸೇವಕ ಸಂಘ ಮಂಗಳೂರು ವಿಭಾಗ ಮಾನ್ಯ ಸಂಘ ಚಾಲಕರು ಡಾ. ನಾರಾಯಣ ಶೆಣೈ ಭಾರತಾಂಬೆಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಕಳ ಕಮಲಾಕ್ಷ ಕಾಮತ್ ಶಿಶುಮಂದಿರದ ಬಳಿ ಪ್ರತಿಷ್ಠಾಪಿಸಿದ ಸರಸ್ವತಿ ವಿಗ್ರಹವನ್ನು ಅನಾವರಣ ಮಾಡಿದರು. ಶಿಶುಮಂದಿರದ ಪುಟಾಣಿಗಳಿಗೆ ಆರತಿ ಬೆಳಗಿ ತಿಲಕ ಇಟ್ಟು ಸಿಹಿ ನೀಡಲಾಯಿತು ವಿಧ್ಯಾರ್ಥಿಗಳು ಶಿಶುಮಂದಿರದ ನೂತನ ಕುಟೀರದ ಹೊಸ್ತಿಲಿಗೆ ನಮಸ್ಕಾರ ಮಾಡಿ ಒಳಗೆ ಪ್ರವೇಶ ಮಾಡಿದರು. ನಂತರ ಎಮ್.ಆರ್.ಪಿ.ಎಲ್ ನ ಸಿಎಸ್ಆರ್ ಮೂಲಕ ನಿರ್ಮಿಸಲಾದ 4 ಕೊಠಡಿಗಳ ನೂತನ ಕಟ್ಟಡವನ್ನು ಎಮ್.ಆರ್.ಪಿ.ಎಲ್ ನ ಹಿರಿಯ ಅಧಿಕಾರಿ ಪ್ರದೀಪ್ ಉದ್ಘಾಟಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ಸಭಕಾರ್ಯಕ್ರಮ ನಡೆಯಿತು,

ವೇದಿಕೆಯಲ್ಲಿ ಎಮ್.ಆರ್.ಪಿ.ಎಲ್ ನ ಅಧಿಕಾರಿ ಪ್ರದೀಪ್ ಸೇರಿದಂತೆ ಪ್ರಮುಕ ದಾನಿಗಳನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಾರ್ಕಳ ಕಮಲಾಕ್ಷ ಕಾಮತ್, ಡಾ.ರವೀಂದ್ರ ಶೆಟ್ಟಿ ಅಧ್ಯಕ್ಷರು ರಾಜ್ಯ ಕೃಷರ್ ಮಾಲೀಕರ ಸಂಘ ಬಜಗೋಳಿ, ಶಾಲಾ ಆಡಳಿತ ಮಂಡಳಿ ಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹಾಗೂ ಅಧ್ಯಕ್ಷರಾದ ರಾಜು ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya
error: Content is protected !!