25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.


ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 16 ನೇ ವರ್ಷದ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳನ್ನು ಜೂ.14 ರಂದು ವಿತರಿಸಿ ಅವರು ಮಾತನಾಡಿದರು.


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ವಹಿಸಿದ್ದರು.
ಪುಸ್ತಕಗಳ ದಾನಿಗಳಾದ ದಂತ ವೈದ್ಯ ಡಾl ಶಶಿಧರ ಡೋಂಗ್ರೆ, ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಡಾl ಸುಷ್ಮಾ ಡೋಂಗ್ರೆ, ಜ್ಯೋತಿ ಪ್ರತಾಪಸಿಂಹ ನಾಯಕ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರವೀಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.
ಡಾl ಡೋಂಗ್ರೆಯವರು ಅಕ್ಷರ ದಾಸೋಹಕ್ಕೆ 16 ಲೀ.ಸಾಮರ್ಥ್ಯದ ಕುಕ್ಕರ್‌ನ್ನು ಕೊಡುಗೆಯಾಗಿಯೂ ನೀಡಿದರು. ನಾಯಕ್ ಅವರು ಶಾಲಾಭಿವೃದ್ಧಿಗೆ ರೂ.5,000 ದೇಣಿಗೆ ನೀಡಿದರು. ಶಾಲಾ ಹಳೆವಿದ್ಯಾರ್ಥಿ ಕೃಷ್ಣ ಆಠವಳೆ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಕ್ಕೆ ಅವರನ್ನು ಪುರಸ್ಕರಿಸಲಾಯಿತು.


ಶಾಲಾ‌ ಮುಖ್ಯೋಪಾಧ್ಯಾಯಿನಿ ಲೀನಾ ಮೋರಾಸ್ ಸ್ವಾಗತಿಸಿ ವಂದಿಸಿದರು. ದೀಪಕ ಆಠವಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!