23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.


ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 16 ನೇ ವರ್ಷದ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳನ್ನು ಜೂ.14 ರಂದು ವಿತರಿಸಿ ಅವರು ಮಾತನಾಡಿದರು.


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ವಹಿಸಿದ್ದರು.
ಪುಸ್ತಕಗಳ ದಾನಿಗಳಾದ ದಂತ ವೈದ್ಯ ಡಾl ಶಶಿಧರ ಡೋಂಗ್ರೆ, ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಡಾl ಸುಷ್ಮಾ ಡೋಂಗ್ರೆ, ಜ್ಯೋತಿ ಪ್ರತಾಪಸಿಂಹ ನಾಯಕ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರವೀಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.
ಡಾl ಡೋಂಗ್ರೆಯವರು ಅಕ್ಷರ ದಾಸೋಹಕ್ಕೆ 16 ಲೀ.ಸಾಮರ್ಥ್ಯದ ಕುಕ್ಕರ್‌ನ್ನು ಕೊಡುಗೆಯಾಗಿಯೂ ನೀಡಿದರು. ನಾಯಕ್ ಅವರು ಶಾಲಾಭಿವೃದ್ಧಿಗೆ ರೂ.5,000 ದೇಣಿಗೆ ನೀಡಿದರು. ಶಾಲಾ ಹಳೆವಿದ್ಯಾರ್ಥಿ ಕೃಷ್ಣ ಆಠವಳೆ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಕ್ಕೆ ಅವರನ್ನು ಪುರಸ್ಕರಿಸಲಾಯಿತು.


ಶಾಲಾ‌ ಮುಖ್ಯೋಪಾಧ್ಯಾಯಿನಿ ಲೀನಾ ಮೋರಾಸ್ ಸ್ವಾಗತಿಸಿ ವಂದಿಸಿದರು. ದೀಪಕ ಆಠವಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!