25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.


ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 16 ನೇ ವರ್ಷದ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳನ್ನು ಜೂ.14 ರಂದು ವಿತರಿಸಿ ಅವರು ಮಾತನಾಡಿದರು.


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ವಹಿಸಿದ್ದರು.
ಪುಸ್ತಕಗಳ ದಾನಿಗಳಾದ ದಂತ ವೈದ್ಯ ಡಾl ಶಶಿಧರ ಡೋಂಗ್ರೆ, ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಡಾl ಸುಷ್ಮಾ ಡೋಂಗ್ರೆ, ಜ್ಯೋತಿ ಪ್ರತಾಪಸಿಂಹ ನಾಯಕ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರವೀಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.
ಡಾl ಡೋಂಗ್ರೆಯವರು ಅಕ್ಷರ ದಾಸೋಹಕ್ಕೆ 16 ಲೀ.ಸಾಮರ್ಥ್ಯದ ಕುಕ್ಕರ್‌ನ್ನು ಕೊಡುಗೆಯಾಗಿಯೂ ನೀಡಿದರು. ನಾಯಕ್ ಅವರು ಶಾಲಾಭಿವೃದ್ಧಿಗೆ ರೂ.5,000 ದೇಣಿಗೆ ನೀಡಿದರು. ಶಾಲಾ ಹಳೆವಿದ್ಯಾರ್ಥಿ ಕೃಷ್ಣ ಆಠವಳೆ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಕ್ಕೆ ಅವರನ್ನು ಪುರಸ್ಕರಿಸಲಾಯಿತು.


ಶಾಲಾ‌ ಮುಖ್ಯೋಪಾಧ್ಯಾಯಿನಿ ಲೀನಾ ಮೋರಾಸ್ ಸ್ವಾಗತಿಸಿ ವಂದಿಸಿದರು. ದೀಪಕ ಆಠವಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya
error: Content is protected !!