September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.


ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 16 ನೇ ವರ್ಷದ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳನ್ನು ಜೂ.14 ರಂದು ವಿತರಿಸಿ ಅವರು ಮಾತನಾಡಿದರು.


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ವಹಿಸಿದ್ದರು.
ಪುಸ್ತಕಗಳ ದಾನಿಗಳಾದ ದಂತ ವೈದ್ಯ ಡಾl ಶಶಿಧರ ಡೋಂಗ್ರೆ, ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಡಾl ಸುಷ್ಮಾ ಡೋಂಗ್ರೆ, ಜ್ಯೋತಿ ಪ್ರತಾಪಸಿಂಹ ನಾಯಕ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರವೀಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.
ಡಾl ಡೋಂಗ್ರೆಯವರು ಅಕ್ಷರ ದಾಸೋಹಕ್ಕೆ 16 ಲೀ.ಸಾಮರ್ಥ್ಯದ ಕುಕ್ಕರ್‌ನ್ನು ಕೊಡುಗೆಯಾಗಿಯೂ ನೀಡಿದರು. ನಾಯಕ್ ಅವರು ಶಾಲಾಭಿವೃದ್ಧಿಗೆ ರೂ.5,000 ದೇಣಿಗೆ ನೀಡಿದರು. ಶಾಲಾ ಹಳೆವಿದ್ಯಾರ್ಥಿ ಕೃಷ್ಣ ಆಠವಳೆ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಕ್ಕೆ ಅವರನ್ನು ಪುರಸ್ಕರಿಸಲಾಯಿತು.


ಶಾಲಾ‌ ಮುಖ್ಯೋಪಾಧ್ಯಾಯಿನಿ ಲೀನಾ ಮೋರಾಸ್ ಸ್ವಾಗತಿಸಿ ವಂದಿಸಿದರು. ದೀಪಕ ಆಠವಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!