July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!