September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya
error: Content is protected !!