23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya
error: Content is protected !!