22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

Suddi Udaya
error: Content is protected !!