25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಇಂದು ಸಂಜೆ ಸಂಭವಿಸಿದೆ.

ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ ಸ್ಥಳೀಯ ನಿವಾಸಿ ಲಕ್ಷ್ಮಣ ಶೆಟ್ಟಿಯವರು ಅವರು ದನಗಳಿಗೆ ಹುಲ್ಲು ಕತ್ತರಿಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಹುಲ್ಲು ಕತ್ತರಿಸುವಾಗ ಆಕಸ್ಮಿಕವಾಗಿ ಹುಲ್ಲಿನ ಜೊತೆ ಲಕ್ಷ್ಮಣ ಶೆಟ್ಟಿಯವರ ಎರಡು ಕೈಗಳು ಯಂತ್ರದೊಳಗೆ ಹೋಗಿದ್ದು, ಒಂದು ಕೈಯ ಅಂಗೈ ಪೂರ್ತಿ ತುಂಡಾಗಿದೆ. ಇನ್ನೊಂದು ಕೈಯ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಮನೆಯವರು ಹಾಗೂ ಸ್ಥಳೀಯರ ಸಹಕಾರದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!