22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ತಾಲೂಕು ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಸಹಿತ ಇಬ್ಬರಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕಳೆಂಜದಲ್ಲಿರುವ ತನ್ನ ಅಡಿಕೆ ಅಂಗಡಿ ಬಂದ್ ಮಾಡಿ ಮನೆಗೆ ಹೊರಡುವ ವೇಳೆ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ.ಅವರಿಗೆ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಎಂಬವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಎ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜೇಶ್ ಎಂ.ಕೆ.ಅವರ ಕೊಲೆ ಯತ್ನ ಪ್ರಯತ್ನ ನಡೆದ ಬೆನ್ನಿಗೇ ರಾಜೇಶ್ ಮತ್ತು ಅಭಿ ಯಾನೆ ಮೋಹನ್ ಎಂಬವರ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಬಂಧನ ಭೀತಿಯಲ್ಲಿದ್ದ ರಾಜೇಶ್ ಎಂ.ಕೆ. ಮತ್ತು ಅಭಿ ಯಾನೆ ಮೋಹನ್ ಅವರಿಗೆ ಜೂನ್ 14ರಂದು ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ಖ್ಯಾತ ವಕೀಲ ಶಂಭು ಶರ್ಮ ವಾದಿಸಿದ್ದರು.

Related posts

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya
error: Content is protected !!