April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಇತ್ತೀಚೆಗೆ ಶ್ರೀ ಮಂಜುನಾಥೇಶ್ವರ ಸಭಾಭವನ ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿ ನೆರವೇರಿತ್ತು.

ಈ ಸಂಧರ್ಭದಲ್ಲಿ ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗೀರಿ ಸಂಸ್ಥಾನ ಮಠಾಧ್ಯಾಕ್ಷರಾದ ಶಕ್ತಿವಿಶಿಷ್ಟಾದ್ವೈತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ .ಷ.ಬ್ರ. ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ಕವಲೇ ದುರ್ಗ ತೀರ್ಥಹಳ್ಳಿ ತಾಲೂಕು ಶಿವಮೊಗ್ಗ ಜಿಲ್ಲೆ ಇವರ ಶುಭ ಆರ್ಶಿವಾದದಿಂದ ಕಾರ್ಯಕ್ರಮ ನೇರವೇರಿತ್ತು.

ಸಮಾಜದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ, ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ, ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ್ ಬೆಳ್ತಂಗಡಿ, ಕೋಶಾಧಿಕಾರಿ ಲೀಲಾಧರ ಕಿಲ್ಲೂರು, ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಮಂಜುಳ ಸತೀಶ್, ಕಾರ್ಯದರ್ಶಿ ಶ್ರೀಮತಿ ಆಶ್ವಿನಿ ದಿನೇಶ್, ಕೋಶಾಧಿಕಾರಿ ಶ್ರೀಮತಿ ಮಮತ ರವೀಂದ್ರ ಹಾಗೂ ಸಮಾಜ ಭಾಂಧವರು ಭಾಗವಹಿಸಿದರು.

ಈ ಸಂಧರ್ಭದಲ್ಲಿ ಮೋಹನ್ ಬೆಳ್ತಂಗಡಿ ಸಾರಥ್ಯದ ಸಪ್ತಸ್ವರಗಳ ಗಾನಯಾನ ಕಾರ್ಯಕ್ರಮ ಮತ್ತು ಸಮಾಜ ಭಾಂದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತ್ತು.

Related posts

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya
error: Content is protected !!