September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಇತ್ತೀಚೆಗೆ ಶ್ರೀ ಮಂಜುನಾಥೇಶ್ವರ ಸಭಾಭವನ ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿ ನೆರವೇರಿತ್ತು.

ಈ ಸಂಧರ್ಭದಲ್ಲಿ ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗೀರಿ ಸಂಸ್ಥಾನ ಮಠಾಧ್ಯಾಕ್ಷರಾದ ಶಕ್ತಿವಿಶಿಷ್ಟಾದ್ವೈತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ .ಷ.ಬ್ರ. ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ಕವಲೇ ದುರ್ಗ ತೀರ್ಥಹಳ್ಳಿ ತಾಲೂಕು ಶಿವಮೊಗ್ಗ ಜಿಲ್ಲೆ ಇವರ ಶುಭ ಆರ್ಶಿವಾದದಿಂದ ಕಾರ್ಯಕ್ರಮ ನೇರವೇರಿತ್ತು.

ಸಮಾಜದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ, ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ, ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ್ ಬೆಳ್ತಂಗಡಿ, ಕೋಶಾಧಿಕಾರಿ ಲೀಲಾಧರ ಕಿಲ್ಲೂರು, ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಮಂಜುಳ ಸತೀಶ್, ಕಾರ್ಯದರ್ಶಿ ಶ್ರೀಮತಿ ಆಶ್ವಿನಿ ದಿನೇಶ್, ಕೋಶಾಧಿಕಾರಿ ಶ್ರೀಮತಿ ಮಮತ ರವೀಂದ್ರ ಹಾಗೂ ಸಮಾಜ ಭಾಂಧವರು ಭಾಗವಹಿಸಿದರು.

ಈ ಸಂಧರ್ಭದಲ್ಲಿ ಮೋಹನ್ ಬೆಳ್ತಂಗಡಿ ಸಾರಥ್ಯದ ಸಪ್ತಸ್ವರಗಳ ಗಾನಯಾನ ಕಾರ್ಯಕ್ರಮ ಮತ್ತು ಸಮಾಜ ಭಾಂದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತ್ತು.

Related posts

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya
error: Content is protected !!