25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

ಬೆಳ್ತಂಗಡಿ: ನಿಮ್ಮ ಮಗ ರೇಪ್ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾನೆ ಎಂದು ಪೋಷಕರಿಗೆ ವಿದೇಶಿ ಕರೆ ಬಂದಿರುವ ಘಟನೆ ಜೂ. 11ರಂದು ಪಟ್ರಮೆಯಲ್ಲಿ ನಡೆದಿದೆ. ಕಳೆದ ಮೂರಾಲ್ಕು ದಿನಗಳಿಂದ ಕರಾವಳಿಯ ಹಲವು ಮಂದಿಗೆ ಇಂತಹದೇ ರೀತಿಯ ಕರೆಗಳು ಬರುತ್ತಿದ್ದು, ಪೋಷಕರು ಆತಂಕಕ್ಕೆ ಒಳಗಾದ ಘಟನೆಗಳು ಸಂಭವಿಸಿವೆ.

ಧರ್ಮಸ್ಥಳದ ಪಟ್ರಮೆ ನಿವಾಸಿ ಸುನಿಲ್ ಮತ್ತು ಅನುಪಮಾ ಅವರ ಪುತ್ರ ಮಂಗಳೂರಿನಲ್ಲಿ ಕಾಲೇಜಿನಲ್ಲಿ ಓದುತ್ತಿದ್ದು ಜೂ. 11ರಂದು 10.30ರ ವೇಳೆಗೆ ಪೋಷಕರಿಗೆ ವಿದೇಶಿ ನಂಬರ್‌ ನಿಂದ ವಾಟ್ಸ್ ಆ್ಯಪ್ ಕರೆ ಬಂದಿತ್ತು.

ಮಗನ ಶಾಲಾ ದಾಖಲಾತಿಗಳಲ್ಲಿ ತಾಯಿಯ ನಂಬ‌ರ್ ನೀಡಲಾಗಿತ್ತು. ಅದೇ ಸಂಖ್ಯೆಗೆ ಫೋನ್ ಕರೆ ಬಂದಿತ್ತು. ಮಹಿಳೆ ಜತೆ ಮಾತನಾಡಿದ ವ್ಯಕ್ತಿ ತಂದೆಯ ಹೆಸರು ಹೇಳಿ ಬಳಿಕ ಮಗನ ಹೆಸರು ಹೇಳಿದರು. ನಿಮ್ಮ ಮಗ ರೇಪ್ ಕೇಸ್ ನಲ್ಲಿ ಸಿಕ್ಕಿ ಬಿದ್ದಿದ್ದಾನೆ. ರಾಜಿಗೆ ಬರುತ್ತಿರಾ? ಅಂತ ಕೇಳಿದನು. ವಿಚಾರ ತಿಳಿದು ಒಮ್ಮೆಗೆ ಆಘಾತಕ್ಕೊಳಗಾದ ತಾಯಿ ಧೃತಿಗೆಡದೆ ಕರೆಮಾಡಿದವರನ್ನು ಸರಿಯಾಗಿ ವಿಚಾರಿಸುವ ಪ್ರಯತ್ನ ಮಾಡಿದರು. ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಪತಿ ಕೂಡ ಅವರಲ್ಲಿ ಮಾತನಾಡಿದ್ದರು. ಇದು ನಕಲಿ ಕರೆ ಇರಬಹುದೆಂದು ಅದನ್ನು ಕಟ್ ಮಾಡಿದ ಬಳಿಕ ವಂಚಕರು ಮತ್ತೆ ಕರೆ ಮಾಡಿದರು.

ಆಗ ಆತ, ‘ಪೊಲೀಸರ ಕರೆಯನ್ನೇ ಫ್ರಾಡ್ ಅಂತ ಹೇಳುವಷ್ಟು ಧೈರ್ಯವೇ ನಿಮಗೆ?’ ಎಂದು ಕೇಳಿದ್ದಾರಂತೆ. ಇಷ್ಟಕ್ಕೂ ಮಗ ಕಿಡ್ನಾಪ್ ಆಗಿದ್ದು ನಿಜಾನ ಅಂತ ನೋಡೋಕೆ ಮಗನಿಗೆ ಕಾಲ್ ಕೊಡುವಂತೆ ಪೋಷಕರು ತಿಳಿಸಿದರು. ಆಗ ಇವರ ಮಗ ಅಳುವ ಹಾಗೆ ಆ ಕಡೆಯಿಂದ ಅಳುವ ಧ್ವನಿ ಕೇಳಿಸಿತ್ತು. ಆಗ ಇದು ವಂಚಕರ ಕರೆ ಎಂಬುದನ್ನು ಅರಿತು ಅವರನ್ನೇ ತರಾಟೆಗೆ ತೆಗೆದುಕೊಂಡರು. ಅನಂತರ ಬೆಂಗಳೂರಿನಲ್ಲಿ ನಮ್ಮ ಸಂಬಂಧಿಕರು ಪೊಲೀಸ್ ಆಗಿದ್ದು, ಅವರಿಗೆ ನಿಮ್ಮ ಫೋನ್ ನಂಬರ್ ಕೊಡುತ್ತೇವೆ ಅವರು ಮಾತನಾಡುತ್ತಾರೆ ಎಂಬುದಾಗಿ ಹೇಳಿದಾಕ್ಷಣ ವಂಚಕರು ಕರೆ ಕಟ್ ಮಾಡಿದರು ಎಂದು ವಿವರಿಸಿದರು. ಅವರ ಕರೆಯಲ್ಲಿ ಪೊಲೀಸ್ ವ್ಯಕ್ತಿಯೊಬ್ಬರ ಪ್ರೊಫೈಲ್ ಬೇರೆ ಹಾಕಿದ್ದರು.

ಬಳಿಕ ದಂಪತಿ ಕಾಲೇಜಿಗೆ ಕರೆ ಮಾಡಿ ಮಗ ಕ್ಷೇಮವಾಗಿರುವ ವಿಚಾರವನ್ನು ದೃಢಪಡಿಸಿಕೊಂಡರು. ಜೂ.11 ಮತ್ತು 12ರಂದು ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ನಗರದ ಸೈಬರ್‌ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿವೆ. ಮಂಗಳೂರು ನಗರದ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಹಲವಾರು ವಿದ್ಯಾರ್ಥಿಗಳ ಪೋಷಕರಿಗೆ ಈ ರೀತಿಯ ಬೆದರಿಕೆಯ ಕರೆಗಳು ಬಂದಿವೆ. ಇದರಲ್ಲಿ ಹೆಚ್ಚಾಗಿ ಪೋಲಂಡ್ ಮತ್ತು ಪಾಕಿಸ್ಥಾನದಂತಹ ವಿದೇಶಿ ಸಂಖ್ಯೆಗಳನ್ನು ಹೊಂದಿದ್ದವು. ಪೋಷಕರನ್ನು ಬೆದರಿಸಿ ಹಣ ವಸೂಲಿ ಮಾಡಲಾಗಿದ್ದು ಪೋಷಕರು ಮತ್ತು ಸಂಸ್ಥೆಗಳು ಇಂತಹ ಕರೆಗಳಿಗೆ ಭಯಪಡಬೇಡಿ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya
error: Content is protected !!