23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.


ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 16 ನೇ ವರ್ಷದ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳನ್ನು ಜೂ.14 ರಂದು ವಿತರಿಸಿ ಅವರು ಮಾತನಾಡಿದರು.


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ವಹಿಸಿದ್ದರು.
ಪುಸ್ತಕಗಳ ದಾನಿಗಳಾದ ದಂತ ವೈದ್ಯ ಡಾl ಶಶಿಧರ ಡೋಂಗ್ರೆ, ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಡಾl ಸುಷ್ಮಾ ಡೋಂಗ್ರೆ, ಜ್ಯೋತಿ ಪ್ರತಾಪಸಿಂಹ ನಾಯಕ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರವೀಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.
ಡಾl ಡೋಂಗ್ರೆಯವರು ಅಕ್ಷರ ದಾಸೋಹಕ್ಕೆ 16 ಲೀ.ಸಾಮರ್ಥ್ಯದ ಕುಕ್ಕರ್‌ನ್ನು ಕೊಡುಗೆಯಾಗಿಯೂ ನೀಡಿದರು. ನಾಯಕ್ ಅವರು ಶಾಲಾಭಿವೃದ್ಧಿಗೆ ರೂ.5,000 ದೇಣಿಗೆ ನೀಡಿದರು. ಶಾಲಾ ಹಳೆವಿದ್ಯಾರ್ಥಿ ಕೃಷ್ಣ ಆಠವಳೆ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಕ್ಕೆ ಅವರನ್ನು ಪುರಸ್ಕರಿಸಲಾಯಿತು.


ಶಾಲಾ‌ ಮುಖ್ಯೋಪಾಧ್ಯಾಯಿನಿ ಲೀನಾ ಮೋರಾಸ್ ಸ್ವಾಗತಿಸಿ ವಂದಿಸಿದರು. ದೀಪಕ ಆಠವಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya
error: Content is protected !!